ಸೆಪ್ಟೆಂ 1, 2012

ಕೆ.ಪಿ.ಪೂರ್ಣಚಂದ್ರ ತೇಜಸ್ವಿ


[ಕನ್ನಡ]

"ಎದ್ದೇಳಿ ಎಚ್ಚರಗೊಳ್ಳಿ"
ಎಂದು ಸಂದಣಿಯಲ್ಲಿ ಅಬ್ಬರಿಸಿ ಕೂಗಿತೊಂದು ವಾಣಿ

"ಬೆಚ್ಚಿ ಬೀಳುವಿರೇನು ಪೆಚ್ಚುಗಳಿರಾ!
ಹತ್ತಿಪ್ಪತ್ತು ವರುಷ ಸುಪ್ಪತ್ತಿಗೆಯ ಮೇಲೆ
ಸರಸ ಸಲ್ಲಾಪದಲಿ ಕಳೆದುದ್ದಾಯ್ತು ಕಾಲ.
ಕವಿವ ಕಾಳರಾತ್ರಿಯ ಕೋಳ
ಕಾಣದೇ ಮರುಳ."

"ಉತ್ತರದ ಗಡಿಯ ನೆತ್ತರಿನ ಹೊನಲ
ಬಿತ್ತರದ ರಣಕಹಳೆ ಹೊಯ್ಲುಗಳ
ಕಂಡು ಕೇಳದ ನೀವು; ಕೀಟಗಳಿರಾ
ಎದ್ದೇಳಿ ಎಚ್ಚರಗೊಳ್ಳಿ"

ಎಂದಂದು ಬಾನುಲಿಯಲ್ಲಿ ಗಟ್ಟಿ
ಚೆಕ್ಕಿಗೊಂದು ರುಜು ಹೆಟ್ಟಿ
ಮಲಗಿದನು ಕವಿಯು
ಕಕ್ಕಾಬಿಕ್ಕಿಯಾಗಿ ರಾತ್ರಿಗೆ ಸರಿದಿತ್ತು ಬುವಿ